ಈ ಬಾರಿ ಮಳೆಯ ಆರ್ಭಟಕ್ಕೆ ತತ್ತರಿಸಿದ ರಾಜ್ಯಗಳಲ್ಲಿ ಆಂಧ್ರಪ್ರದೇಶವೂ ಒಂದು. ಭರ್ಜರಿ ಮಳೆಯಿಂದಾಗಿ ಅಲ್ಲಿ ಅಪಾರ ಹಾನಿಯಾಗಿದೆ. ಮೃತಪಟ್ಟವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. 16 ಮಂದಿ ನಾಪತ್ತೆಯಾಗಿದ್ದಾರೆ. ಈ ಮಧ್ಯೆ ನಿನ್ನೆ ಹೇಳಿಕೆ ಬಿಡುಗಡೆ ಮಾಡಿರುವ ಆಂಧ್ರ ಸಿಎಂ ವೈ.ಎಸ್.ಜಗನ್ ರೆಡ್ಡಿ, ಆಂಧ್ರದ ನಾಲ್ಕು ಜಿಲ್ಲೆಗಳಲ್ಲಿ ಮಳೆಯಿಂದಾದ ಹಾನಿಯ ಬಗ್ಗೆ ಮತ್ತು ಮಳೆ-ಪ್ರವಾಹ ಪರಿಸ್ಥಿತಿಯಿಂದ ಸಂತ್ರಸ್ತರಾದವರಿಗೆ ಆಂಧ್ರ ಸರ್ಕಾರ ನೀಡಲಿರುವ ಪರಿಹಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 19ರಂದು ಅಣ್ಣಮ್ಮಯ್ಯ