ಬೆಂಗಳೂರು : ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಿದ್ದು, ವಿವಿಧ ದೇಗುಲಗಳ ದರ್ಶನಕ್ಕೆ ಯಾತ್ರಾರ್ಥಿಗಳು ಪರದಾಡುವಂತಾಗಿದೆ. ಇನ್ನೂ ಎರಡು ವಾರಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿರುವುದರಿಂದ ಭಕ್ತಾದಿಗಳು ಯಾತ್ರೆ ಹೊರಡುವ ಕುರಿತು ಯೋಚಿಸುವಂತಾಗಿದೆ. ಹೀಗಾಗಿ ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರಗಳಿಗೆ, ದೇಗುಲಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಯಾತ್ರೆ ಕೈಗೊಳ್ಳುವ ಭಕ್ತರು ಹವಾಮಾನ ಇಲಾಖೆ ನೀಡುವ ಮುನ್ಸೂಚನೆಯನ್ನು ಗಮನಿಸಿಯೇ ಮುಂದುವರೆಯಬೇಕೆಂದು ದೇಗುಲಗಳ ಆಡಳಿತ ಮಂಡಳಿಗಳು