ನವದೆಹಲಿ : 'ಪಿಎಂ ಕೇರ್ಸ್ ಫಂಡ್' ಸರ್ಕಾರದ ನಿಧಿಯಲ್ಲ. ಅದಕ್ಕೆ ನೀಡುವ ದೇಣಿಗೆಗಳು ಭಾರತದ ಬೊಕ್ಕಸಕ್ಕೆ ಹೋಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯ (ಆರ್ಟಿಐ) ಅಡಿಯಲ್ಲಿ ಈ ನಿಧಿಗೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.