ನವದೆಹಲಿ : ಪಿಎಂ ಕೇರ್ಸ್ ಫಂಡ್ ಸರ್ಕಾರದ ನಿಧಿಯಲ್ಲ. ಅದಕ್ಕೆ ನೀಡುವ ದೇಣಿಗೆಗಳು ಭಾರತದ ಬೊಕ್ಕಸಕ್ಕೆ ಹೋಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯ (ಆರ್ಟಿಐ) ಅಡಿಯಲ್ಲಿ ಈ ನಿಧಿಗೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಪ್ರಧಾನಿ ಕಚೇರಿಯ (ಪಿಎಂಒ) ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಪಿಎಂ ಕೇರ್ಸ್ ಟ್ರಸ್ಟ್ ಪಾರದರ್ಶಕತೆಯಿಂದ