ಬೆಂಗಳೂರು : ಸಿಲಿಕಾನ್ ಸಿಟಿ ಸೇರಿ ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಅಬ್ಬರ ಅವಾಂತರ ಮುಂದುವರಿದಿದೆ. ಇಂದು ಮಧ್ಯಾಹ್ನ ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಡಿದ್ರು. ಬುಧವಾರ ರಾತ್ರಿ ಹುಬ್ಬಳ್ಳಿಯಲ್ಲಿ ರಣಭೀಕರ ಬಿರುಗಾಳಿ, ಮಳೆಗೆ ಕಿಮ್ಸ್ ಆಸ್ಪತ್ರೆಯ ತಾತ್ಕಾಲಿಕ ಮೇಲ್ಛಾವಣಿ ಕಿತ್ತು ಹೋಗಿದೆ.ಆಸ್ಪತ್ರೆಯ ಡೋರ್, ಕಿಟಕಿಯ ಗಾಜುಗಳು ಪೀಸ್ ಪೀಸ್ ಆಗಿವೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಂತೂ ಬಿರುಗಾಳಿಗೆ ಸಿಲುಕಿ ವಿದ್ಯಾರ್ಥಿನಿಯರು ಒದ್ದಾಡಿದ್ರು. ಇನ್ನು ಸ್ವಲ್ಪ ಜೋರಾಗಿ