ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ನಗರ ಕೇಂದ್ರಗಳಲ್ಲಿ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಾದ ಸ್ವಚ್ಛ ಸರ್ವೇಕ್ಷಣ್ 2021ರಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಐದನೇ ವರ್ಷವೂ ಭಾರತದ ಸ್ವಚ್ಛ ನಗರ ಎಂಬ ಬಿರುದನ್ನು ಉಳಿಸಿಕೊಂಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ನಗರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇಂದೋರ್ ನಗರದ ನಂತರ ಸೂರತ್ ಹಾಗೂ ವಿಜಯವಾಡಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ವಚ್ಛ ನಗರಗಳಾಗಿ ಸ್ಥಾನ ಪಡೆದಿವೆ.