ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆರಂಭದಲ್ಲೇ ಸರ್ವರ್ ಸಮಸ್ಯೆ ವಿಘ್ನ ತಂದೊಡ್ಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ ಕಾಡಿದೆ. ಗೃಹಲಕ್ಷ್ಮಿಗೆ ನೋಂದಣಿ ಮಾಡಿಕೊಳ್ಳಲು ಮುಂದಾದ ಮಹಿಳೆಯರು ಸರ್ವರ್ ಸಮಸ್ಯೆಯಿಂದ ಪರದಾಡಿದ್ದಾರೆ. ಹೌದು, ಮೊನ್ನೆ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗುರುವಾರ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಆರಂಭದಲ್ಲೇ ಸರ್ವರ್ ಸಮಸ್ಯೆ ಎದುರಾಗಿದೆ. ಜೊತೆಗೆ ಪಡಿತರ ಚೀಟಿಗೆ ನೀಡಿರುವ