ಬೆಳಗಾವಿ : ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.ನಿಧನರಾದ ವಿಷಯ ತಿಳಿದು ಮಧ್ಯರಾತ್ರಿಯೇ ಕತ್ತಿ ನಿವಾಸದತ್ತ ಹರಿದು ಜನರು ಬರುತ್ತಿದ್ದಾರೆ. ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲೇ ಒಂದಷ್ಟು ಕುಟುಂಬ ಸದಸ್ಯರಿದ್ದಾರೆ. ಬೆಂಗಳೂರು ಎಚ್ಎಎಲ್ನಿಂದ ಹೊರಟ ವಿಶೇಷ ಹೆಲಿಕಾಪ್ಟರ್ನಲ್ಲಿ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು 10:30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದರ್ಶನಕ್ಕೆ ವ್ಯವಸ್ಥೆ