ಬೆಂಗಳೂರು (ಜು.03): ರೈತರ ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್ ತಿದ್ದುಪಡಿ ಮಸೂದೆ-2021’ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.