ಹುಬ್ಬಳ್ಳಿ : ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು,ಇಡೀ ರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳವಾಗಿರುವ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಆದ್ದರಿಂದ ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ