ಉಡುಪಿ: ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ವಿನಯ್ ಕುಮಾರ್ ಸೊರಕೆಯವರನ್ನು ಈ ಬಾರಿ ಭಾರಿ ಅಂತರದಿಂದ ಗೆಲ್ಲಿಸಿ ಮತ್ತೊಮ್ಮೆ ವಿಧಾನ ಸೌಧದ ಪಡಸಾಲೆಗೆ ಕಳುಹಿಸಿಬೇಕು ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನ ರಾಜೀವ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ರು. ಹಿರಿಯ ರಾಜಕಾರಣಿ ಜನಾರ್ಧನ