ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತ ನಿರ್ಮಾಣದ ಆಶಯಕ್ಕೆ ಪೂರಕವಾದ ಐತಿಹಾಸಿಕ ಬಜೆಟ್ ಮಂಡನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ. ಪಾಶ್ಚಾತ್ಯ ಸಂಸ್ಕೃತಿಯ ಸೂಟ್ಕೇಸ್ ಬದಿಗಿರಿಸಿ ಭಾರತೀಯತೆಯಂತೆ ಕೆಂಪು ವಸ್ತ್ರದಲ್ಲಿ ಬಜೆಟ್ ಪ್ರತಿಗಳ ಕಟ್ಟನ್ನು ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರವು ನಮ್ಮ ಪರಂಪರೆ ಉಳಿಸುವತ್ತ