ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ.
ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ಉತ್ತಮವಾದ ವಿಚಾರದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ.
ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.
ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ.
ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.
ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.
ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.
ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.
ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.