ಬೆಂಗಳೂರು|
guna|
Last Updated:
ಶುಕ್ರವಾರ, 16 ಮೇ 2014 (15:07 IST)
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವಿ.
ಸದಾನಂದ ಗೌಡ ಗೆಲುವಿನ ನಗೆ ಬೀರಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸಮೀಪದ ಸ್ಪರ್ಧಿ ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ವಿರುದ್ಧ ಶೋಭಾ ಕರಂದ್ಲಾಜೆ ಜಯ ಸಾಧಿಸಿದ್ದಾರೆ.
ಉತ್ತರ ಕನ್ನಡದಲ್ಲಿ
ಬಿಜೆಪಿಯ ಅನಂತ ಕುಮಾರ್ ಹೆಗಡೆ ಕಾಂಗ್ರೆಸ್ ಪಕ್ಷದ ಪ್ರಶಾಂತ್ ದೇಶಪಾಂಡೆ ವಿರುದ್ಧ
ಜಯಭೇರಿ ಬಾರಿಸಿದ್ದಾರೆ.
ಶಿವಮೊಗ್ಗದಲ್ಲಿ ಯಡಿಯೂರಪ್ಪ ಮತ್ತು ದಕ್ಷಿಣ ಕನ್ನಡದಲ್ಲಿ ನಳೀನ್ ಕುಮಾರ್ ಕಟೀಲ್ ಗೆಲುವು ಗಳಿಸಿದ ಇನ್ನಿಬ್ಬರು ಬಿಜೆಪಿ ಅಭ್ಯರ್ಥಿಗಳು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನಂತ ಕುಮಾರ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ನಂದನ್ ನಿಲೇಕಣಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.