ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಪಾರ್ವತಮ್ಮ ರಾಜ್‌ಕುಮಾರ್ ಮಡಿಲಿಗೆ ರಂಗಾಭರಣ ಪ್ರಶಸ್ತಿ
ಸುದ್ದಿ/ಗಾಸಿಪ್
Feedback Print Bookmark and Share
 
ನಗರದ ಖ್ಯಾತ ಪ್ರದರ್ಶಕ ಹಾಗೂ ಲಲಿತ ಕಲಾ ಶಾಲೆ ಕೊಡಮಾಡುವ ರಂಗಾಭರಣ ಪ್ರಶಸ್ತಿಗೆ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ರವರು ಆಯ್ಕೆಯಾಗಿದ್ದಾರೆ.

ಸಂಜಯನಗರದ ಕೆ.ಇ.ಬಿ. ಬಡಾವಣೆಯಲ್ಲಿ ಸಂಸ್ಥೆ ನೂತನವಾಗಿ ನಿರ್ಮಿಸಿರುವ ಚಂದ್ರಪ್ರಿಯ ರಂಗಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿದುಬಂದಿದೆ.

ಬೆಂಗಳೂರು ಉತ್ತರ ಭಾಗದಲ್ಲಿನ ರಂಗಮಂದಿರದ ಕೊರತೆಯನ್ನು ನೀಗಿಸಲು ಸಂಸ್ಥೆ ಈ ರಂಗಮಂದಿರವನ್ನು ನಿರ್ಮಿಸಿದ್ದು ಅವದೂತ ದತ್ತಪೀಠದ ಸ್ವಾಮೀಜಿ ಶ್ರೀ ವಿಜಯಾನಂದರು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಖ್ಯಾತ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯನವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಚಿತ್ರನಟ ರಾಘವೇಂದ್ರ ರಾಜ್ಕುಮಾರ್‌ರವರು ಭಾನುವಾರದ ಅಭಿನಯ ತರಗತಿಗಳನ್ನು ಉದ್ಘಾಟಿಸಲಿದ್ದಾರೆ.