ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಮೇರು ನಟ ವಿಷ್ಣು ಹೆಸರಲ್ಲಿ ಶಾಶ್ವತ ಕಾರ್ಯಕ್ರಮ:ಸಿಎಂ (Vishnuvardhan No More | Kannada Film Actor | Vishnu Sena | Kannada Cinema Artist)
ಸುದ್ದಿ/ಗಾಸಿಪ್
Bookmark and Share Feedback Print
 
PR
ಹೃದಯಾಘಾತದಿಂದ ಕಣ್ಮರೆಯಾದ ಪಂಚಭಾಷಾ ನಟ ಡಾ.ವಿಷ್ಣುವರ್ಧನ್ ಅವರ ಹೆಸರಲ್ಲಿ ಶಾಶ್ವತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಘೋಷಿಸಿದ್ದಾರೆ.

ಬುಧವಾರ ವಿಧಾನಮಂಡಲ ಕಲಾಪದಲ್ಲಿ ಅಗಲಿದ ಮೇರು ನಟ ವಿಷ್ಣುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ವಿಷ್ಣು ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯಕಂಡ ಮತ್ತೊಬ್ಬ ಮೇರುನಟನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಎಂದು ಹೇಳಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ, ಅಭಿಮಾನಿಗಳು, ಸಾರ್ವಜನಿಕರು ಶಾಂತ ರೀತಿಯಿಂದ ವರ್ತಿಸುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಅತಿರೇಕದ ವರ್ತನೆ ತೋರದಿರುವಂತೆಯೂ ಸಾರ್ವಜನಿಕರನ್ನು ಕೋರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಷ್ಣುವರ್ಧನ್, ಯಡಿಯೂರಪ್ಪ, ಕನ್ನಡ ಸಿನಿಮಾ, ಪೊಲೀಸ್