ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಪ್ರತಿಭಟಿಸಿದ ದರ್ಶನ್ ಅಭಿಮಾನಿಗಳಿಗೆ ಪೊಲೀಸರಿಂದ ಲಾಠಿ ರುಚಿ (Darshan Arrested for Assaulting Wife | Challenging Star Darshan | Kannada Actor Darshan | Vijayalaxmi)
ಹಿಂದಿನದು|ಮುಂದಿನದು
PR

ತನ್ನ ಧರ್ಮ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಇದೀಗ ಬೆಂಗಳೂರಿನ ವಿಜಯನಗರ ಪೊಲೀಸರಿಂದ ದಸ್ತಗಿರಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು ಎಂದು ದರ್ಶನ್ ಅಭಿಮಾನಿಗಳು ಬೀದಿಗಿಳಿದಿದ್ದಾರೆ. ಮೊದಲು ವಿಜಯ ನಗರ ಪೊಲೀಸ್ ಠಾಣೆಯೆದುರು ಆನಂತರ ದರ್ಶನ್ ಪತ್ನಿ ವಿಜಯಲಕ್ಷ್ಮಿ ದಾಖಲಾಗಿದ್ದ ವಿಜಯನಗರದ ಗಾಯತ್ರಿ ಆಸ್ಪತ್ರೆ ಎದುರು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಲಾರಂಭಿಸಿದರು. ಅವರ ಗದ್ದಲ, ಆಟಾಟೋಪ ನಿಲ್ಲಿಸುವಂತೆ ಮನವಿ ಮಾಡಿಕೊಂಡರೂ ಕೇಳದ ಕಾರಣದಿಂದಾಗಿ, ಪೊಲೀಸರು ಲಾಠಿ ಬೀಸಿ ಅಭಿಮಾನಿಗಳನ್ನು ಚದುರಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪ್ರತಿಭಟನಾ ನಿರತ ಅಭಿಮಾನಿಗಳು ಪೊಲೀಸರ ವರ್ತನೆಯನ್ನು ವಿರೋಧಿಸಿ ಘೋಷಣೆ ಕೂಗುತ್ತಾ ಚಾಲೆಂಜಿಂಗ್ ಸ್ಟಾರನ್ನು ಬಿಡುಗಡೆ ಮಾಡಲು ಒತ್ತಾಯಿಸುತ್ತಿದ್ದರು. ಅವರನ್ನು ನ್ಯಾಯಾಲಯಕ್ಕೂ ಹಾಜರುಪಡಿಸಬಾರದೆಂದು ಅಭಿಮಾನಿಗಳು ಒತ್ತಾಯಿಸಿದ್ದರು.

ಆಸ್ಪತ್ರೆ ಆವರಣದಲ್ಲಿ ಸದ್ದು, ಕೂಗಾಟ ಜೋರಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತದಲ್ಲಿದ್ದಾಗ, ಪೊಲೀಸರು ಸುಮ್ಮನಿರುವಂತೆ, ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ತೊಂದರೆಯಾಗುತ್ತದೆ, ನಿಲ್ಲಿಸಿ ಎಂದು ಪೊಲೀಸರು ಮನವಿ ಮಾಡಿಕೊಂಡರು. ಆದರೂ ಕೇಳದಾದಾಗ, ಪೊಲೀಸರು ಲಾಠಿ ಎತ್ತಿದ ತಕ್ಷಣವೇ ಅಭಿಮಾನಿಗಳೆಲ್ಲ ದಿಕ್ಕಾಪಾಲಾಗಿ ಓಡಿ ಹೋದರು.

ಪತ್ನಿಯ ಕೈ, ಕಿವಿ, ತೆಲೆ, ಮೈಮೇಲೆಲ್ಲಾ ಗಾಯ! (ಮುಂದಿನ ಪುಟದಲ್ಲಿ)
ಹಿಂದಿನದು|ಮುಂದಿನದು
ಇವನ್ನೂ ಓದಿ