ಸುಪ್ರತಿಮ್ ದತ್ತಾ ಎಂಬವರ ದೇಹದೊಳಕ್ಕೆ ನುಗ್ಗಿದ್ದ ಕಬ್ಬಿಣದ ಸಲಾಕೆಯನ್ನು ಯಶಸ್ವಿಯಾಗಿ ಆಪರೇಶನ್ ಮೂಲಕ ತೆಗೆದ ಎರಡು ತಿಂಗಳಲ್ಲಿ, ನವದೆಹಲಿಯ ಎಐಐಎಂಎಸ್ ವೈದ್ಯರು ಮತ್ತೊಂದು ಸಾಧನೆ ಮಾಡಿದ್ದು, ಅಪಘಾತವೊಂದರಲ್ಲಿ ಏಟುಬಿದ್ದು ಒಡೆದು ಹೋಗಿದ್ದ ಹೃದಯವನ್ನು ಸರಿಪಡಿಸಿ ಪವಾಡ ಸೃಷ್ಟಿಸಿದ್ದಾರೆ.