ಹಣದುಬ್ಬರ ನಿಯಂತ್ರಣವು ದೇಶದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ವೈ.ವಿ.ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಸಗಟು ಬೆಲೆ ಆಧಾರಿತ ಹಣದುಬ್ಬರವು ಹದಿಮೂರು ವರ್ಷಗಳಲ್ಲೇ ಅಧಿಕ ಮಟ್ಟಕ್ಕೇರಿರುವ ಹಿನ್ನೆಲೆಯಲ್ಲಿ, ಬೆಲೆ ಏರಿಕೆಯನ್ನು ಹತೋಟಿಗೆ ತರಲು ಕೇಂದ್ರ ಬ್ಯಾಂಕಿನ ಕ್ರಮವನ್ನು ನಿರೀಕ್ಷಿಸಲಾಗುತ್ತಿದೆ.
ಆಹಾರ ರಕ್ಷಣೆಯ ದೃಷ್ಟಿಕೋನವು ಧನಾತ್ಮಕವಾಗಿಯೇ ಉಳಿದಿದ್ದು, ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪರಿಸ್ಥಿತಿಯು ಉತ್ತಮವಾಗಿಯೇ ಇದೆ ಎಂದು ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.
ಏನೇ ಆದರೂ, ಗಗನಕ್ಕೇರಿದ ತೈಲ ಬೆಲೆಯು ಕಳವಳಕಾರಿಯಾಗಿದ್ದು, ಸಮಸ್ಯೆ ಮತ್ತು ಪರಿಹಾರಗಳ ಕುರಿತಾಗಿ ತೀವ್ರ ರೀತಿಯ ಪರಿಶೀಲನೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ ಅವರು ಇದೇ ವೇಳೆ ಹೇಳಿದರು.
ತೈಲ ಬೆಲೆ ಏರಿಕೆಯಿಂದಾಗಿ ಉಂಟಾಗುತ್ತಿರುವ ಬೆಲೆ ಏರಿಕೆ ಒತ್ತಡವನ್ನು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
|