ದರಗಳನ್ನು ಇಳಿಮುಖವಾಗಿಸುವ ನಿಟ್ಟಿನಲ್ಲಿ ದರಗಳು ಏರಿಕೆಯಾಗಿರುವ ನಗರಗಳಲ್ಲಿ 6 ಮಿಲಿಯನ್ ಟನ್ ಗೋಧಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸರಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು 60 ಲಕ್ಷ ಟನ್ ಗೋಧಿಯನ್ನು ತೆಗೆದಿರಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಭಾರತ ಕೇಂದ್ರ ಕೃಷಿ ಸಮಿತಿ ಆಯೋಜಿಸಿದ ಸಭೆಯಲ್ಲಿ ತಿಳಿಸಿದ್ದಾರೆ.
ದೇಶದ ಕೆಲ ನಗರಗಳಲ್ಲಿ ಗೋಧಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಅಂತಹ ನಗರಗಳಲ್ಲಿ ಮಾತ್ರ ಮುಕ್ತ ಮಾರುಕಟ್ಟೆಯನ್ನು ಪ್ರವೇಶಿಸಲು ಸರಕಾರ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವ ಪವಾರ್ ತಿಳಿಸಿದ್ದಾರೆ.
ಮೊದಲ ಆದ್ಯತೆಯಾಗಿ ಕೇಂದ್ರದಿಂದ ರಾಜ್ಯ ಸರಕಾರಗಳಿಗೆ ಗೋಧಿಯನ್ನು ಸರಬರಾಜು ಮಾಡಿ, ದರಗಳು ಏರಿಕೆಯಾಗಿರುವ ನಗರಗಳಲ್ಲಿ ಮುಕ್ತವಾಗಿ ಗೋಧಿಯನ್ನು ಮಾರಾಟ ಮಾಡುವಂತೆ ಸಲಹೆ ನೀಡಲಾಗುವುದು ಎಂದು ಪವಾರ್ ಹೇಳಿದ್ದಾರೆ.
|