ವೃತ್ತಿಪರ ಶಿಕ್ಷಣವನ್ನು ಪಡೆಯುತ್ತಿರುವ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಸಹಾಯ ಧನ ಹಾಗೂ ಶಿಷ್ಯವೇತನ ಯೋಜನೆಯನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಅರ್ಜುನ್ಸಿಂಗ್ ಹೇಳಿದ್ದಾರೆ.
ವೃತ್ತಿಪರ ಶಿಕ್ಷಣವನ್ನು ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಕ್ಕಾಗಿ ಬಡ್ಡಿ ಸಹಾಯಧನವನ್ನು ನೀಡಲು ಯೋಜನೆಯನ್ನು ರೂಪಿಸಲಾಗಿದೆ ಎಂದು ನವದೆಹಲಿಯಲ್ಲಿ ನಡೆದ ಉನ್ನತ ಶಿಕ್ಷಣ ಸಚಿವರ ಸಮ್ಮೆಳನದಲ್ಲಿ ಕೇಂದ್ರ ಸಚಿವ ಅರ್ಜುನ್ಸಿಂಗ್ ತಿಳಿಸಿದ್ದಾರೆ.
ಸರಕಾರ ರಾಷ್ಟ್ರೀಯ ಮಟ್ಟದ ಮೆರಿಟ್ ಶಿಷ್ಯವೇತನ ಯೋಜನೆಯನ್ನು ಆರಂಭಿಸಲಿದ್ದು, ಪಿಯುಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂತಹ 41ಸಾವಿರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗುವುದು ಎಂದರು.
ಈ ಯೋಜನೆಯಡಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1ಸಾವಿರ ರೂ.ಗಳನ್ನು ಮೊದಲ ಎರಡು ವರ್ಷಗಳ ಹತ್ತು ತಿಂಗಳವರೆಗೆ ನೀಡಲಾಗುವುದು. ನಂತರ ಪ್ರತಿ ತಿಂಗಳು 2ಸಾವಿರ ರೂ.ಗಳನ್ನು ಪಡೆಯಲಿದ್ದಾರೆ ಎಂದು ಹೇಳಿದರು.
|