ಸಿಂಗೂರ್ನಿಂದ ನ್ಯಾನೊ ಕಾರು ಫತ್ಪಾದಕ ಘಟಕವನ್ನು ಸ್ಥಳಾಂತರಿಸುವುದಾಗಿ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ ಉಭಯ ನಾಯಕರು, ಟಾಟಾ ಅವರ ನ್ಯಾನೊ ಕಾರು ಉತ್ಪಾದಕ ಘಟಕ ಸ್ಥಳಾಂತರ ಕುರಿತಂತೆ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್ ಅವರ ಜೊತೆಯಲ್ಲಿ ಆಗಮಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಬೋಸ್ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣದ ವಿವಿಐಪಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬುದ್ದದೇವ್ ಅವರೊಂದಿಗೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ನ್ಯಾನೊ ಕಾರು ಉತ್ಪಾದಕ ಘಟಕವನ್ನು ಸ್ಥಳಾಂತರಿಸಬೇಕೊ ಅಥವಾ ಬೇಡವೊ ಎನ್ನುವ ನಿರ್ಧಾರ ಟಾಟಾ ಅವರಿಗೆ ಸೇರಿದ್ದರಿಂದ ನಾನು ಹೆಚ್ಚಿಗೆ ಹೇಳಲು ಬಯಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಚಿವ ಮುಖರ್ಜಿ ತಿಳಿಸಿದ್ದಾರೆ.
|