ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾದ ಭಾರತ ಸೇರಿದಂತೆ ಇನ್ನಿತರ ದೇಶಗಳು, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಹೂಡಿಕೆಯನ್ನು ನಿರ್ಲ್ಯಕ್ಷಿಸುತ್ತಿರುವುದರಿಂದ ಜಾಗತಿಕ ಹಸಿವಿಗೆ ಕಾರಣವಾಗಿದೆ ಎಂದು ವಿಶ್ವಸಂಸ್ಥೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಮಿಲೇನಿಯಂ ಡೆವಲೆಪ್ಮೆಂಟ್ ಗೋಲ್ಸ್-2008 ಎನ್ನುವ ವರದಿಯಲ್ಲಿ ಅಭಿವೃದ್ಧಿ ಹೊಂದಿದ ಹಾಗೂ ಹೊಂದುತ್ತಿರುವ ರಾಷ್ಟ್ರಗಳು ದೇಶಿಯ ಕೃಷಿಗೆ ನೀಡುತ್ತಿರುವ ಅನುದಾನ ತುಂಬಾ ಕಡಿಮೆ ಎಂದು ವಿಶ್ವಸಂಸ್ಥೆ ಪ್ರಕಟಿಸಿದೆ.
ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಕಳೆದ ಕೆಲ ವರ್ಷಗಳಿಂದ ಕೃಷಿ ಉತ್ಪಾದನೆಯನ್ನು ನಿರ್ಲ್ಯಕ್ಷಿಸಿರುವುದು ಅನುದಾನದ ಕೊರತೆ, ದರ ನಿಯಂತ್ರಣ, ಕೃಷಿ ಅನುದಾನ ಕೊರತೆಗಳಿಂದಾಗಿ ಇಂದಿನ ಜಾಗತಿಕ ಅಹಾರ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಹೇಳಿದೆ.
ಪ್ರಸಕ್ತ ದಶಕದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಹೆಚ್ಚಿನ ಹೂಡಿಕೆ ಹಾಗೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡದಿದ್ದಲ್ಲಿ ಮುಂಬರುವ ದಿನಗಳಲ್ಲಿ ಎದುರಾಗುವ ಜಾಗತಿಕ ಅಹಾರ ಬಿಕ್ಕಟ್ಟು ತಕ್ಕ ಪಾಠ ಕಲಿಸಲಿದೆ ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್ ತಿಳಿಸಿದ್ದಾರೆ.
|