ನವದೆಹಲಿ ಜಾಗತಿಕ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಮಾರುಕಟ್ಟೆ ಸಕಾರಾತ್ಮಕವಾಗಿ ತೋರಿದ ಪ್ರತಿಕ್ರಿಯಿಗೆ ಸರಕಾರ ಬೆಂಬಲ ಸಂಪೂರ್ಣ ಬೆಂಬಲ ನೀಡುತ್ತದೆ ಎನ್ನುವ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಹಾಗೂ ಆರ್ಬಿಐ ಗವರ್ನರ್ ಡಿ.ಸುಬ್ಬಾರಾವ್ ಅವರೊಂದಿಗೆ ಆರ್ಥಿಕ ಸ್ಥಿತಿಯ ಕುರಿತು ಬುಧವಾರ ಪರಿಶೀಲನೆ ನಡೆಸಿದರು.
ಪ್ರಧಾನಿ ಅವರ ನಿವಾಸದಲ್ಲಿ ನಜೆದ ಆರ್ಥಿಕ ಪರಿಶೀಲನಾ ಸಭೆಯಲ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ನಡೆದ ಚರ್ಚೆ ಕುರಿತಂತೆ ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಯಾವುದೇ ಮಾಹಿತಿ ನೀಡಲು ನಿರಾಕರಿಸಿ ನಾಳೆ ವಿವರಗಳನ್ನು ನೀಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು.
ಆರ್ಥಿಕ ಬಿಕ್ಕಟ್ಟಿನ ಕುರಿತಂತೆ ತೆಗೆದುಕೊಂಡ ಕ್ರಮಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಹಾಗೂ ಹಣಕಾಸು ಸಚಿವಾಲಯದ ಅಧಿಕಾರಿಗಳು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ವಿವರಣೆ ನೀಡಿದರು. |