ಅಂತಾರಾಷ್ಟ್ರೀಯ ಮಟ್ಟದ ಹೂಡಿಕೆದಾರರನ್ನು ರಾಜ್ಯಕ್ಕೆ ಸೆಳೆಯಲು ಎಲ್ಲ ಜಿಲ್ಲೆಗಳಲ್ಲೂ ಭೂ ಬ್ಯಾಂಕ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರ ಜನವರಿ 15ಮತ್ತು 16ರಂದು ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮುನ್ನವೇ ಭೂ ಬ್ಯಾಂಕ್ ಸ್ಥಾಪಿಸಲಾಗುವುದು ಎಂದರು.
ಈ ನಿಟ್ಟಿನಲ್ಲಿ ಕೈಗಾರಿಕೆ ಸ್ಥಾಪನೆಗೆ ಅಗತ್ಯ ಭೂಮಿಯನ್ನು ಮೊದಲೇ ಸ್ವಾಧೀನ ಪಡಿಸಿಕೊಂಡು, ಕಾಯ್ದಿರಿಸಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದರು.
ಅಲ್ಲದೇ ಕೈಗಾರಿಕೆಗಳ ಸ್ಥಾಪನೆಗೆಂದು ಸರ್ಕಾರದಿಂದ ಭೂಮಿ ಪಡೆದಿರುವ ಹಲವರು ಅದನ್ನು ಬಳಕೆ ಮಾಡದೆ ಹಾಗೆಯೇ ಉಳಿಸಿಕೊಂಡಿದ್ದಾರೆ. ಬಳಕೆಯಾಗದ ಭೂಮಿಯನ್ನು ಗುರುತಿಸಿ, ವಾಪಸು ಪಡೆಯಲು ಭೂ ಲೆಕ್ಕ ಪರಿಶೋಧನಾ ಸಮಿತಿಯನ್ನು ನೇಮಕ ಮಾಡಲು ಸಭೆ ತೀರ್ಮಾನಿಸಿದೆ ಎಂದು ಹೇಳಿದರು. |