ಜಾಗತಿಕ ಆರ್ಥಿಕ ಬಿಕ್ಕಟ್ಟು ಹಾಗೂ ಅದರಿಂದ ಭಾರತದ ಮೇಲಾಗುವ ಪರಿಣಾಮ ಕುರಿತಂತೆ ಗಮನ ನೀಡಲು ಪ್ರಧಾನಿಯವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ.
ಸಮಿತಿಯಲ್ಲಿ ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ , ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಕಮಲನಾಥ್, ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಮತ್ತು ಆರ್ಬಿಐ ಗವರ್ನರ್ ಡಿ.ಸುಬ್ಬಾರಾವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತ ಹಾಗೂ ಅದರಿಂದ ಭಾರತದ ಮೇಲಾಗುವ ಪರಿಣಾಮ ಕುರಿತಂತೆ ಕೈಗಾರಿಕೋದ್ಯಮ ಸಮಸ್ಯೆಗಳ ಕುರಿತಂತೆ ಶೀಘ್ರದಲ್ಲಿ ಕೇಂದ್ರ ಸರಕಾರದ ಗಮನಕ್ಕೆ ತರಲು ಸಮಿತಿ ಪ್ರತಿದಿನ ಸಭೆಯನ್ನು ನಡೆಸಿ ವರದಿಯನ್ನು ಪ್ರಧಾನಿಯವರಿಗೆ ರವಾನಿಸುತ್ತದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕೈಗಾರಿಕೆ ಉದ್ಯಮಿಗಳೊಂದಿಗೆ ಸಭೆಯನ್ನು ನಡೆಸಿದ ನಂತರ ಸಮಿತಿಯನ್ನು ರಚಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ. |