ಭಾರತದ ಆರ್ಥಿಕತೆ ಕುಸಿತದತ್ತ ಸಾಗುತ್ತಿಲ್ಲ. ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ಭಾರತದ ಆರ್ಥಿಕತೆ ಏರಿಕೆಯತ್ತ ಸಾಗುತ್ತಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ದೇಶಧ ಆರ್ಥಿಕತೆ ಬಲಿಷ್ಟವಾಗಿದೆ. ಆರ್ಥಿಕ ಕುಸಿತ ತಾತ್ಕಾಲಿಕವಾಗಿದ್ದು, ಜನತೆ ಸಹಕಾರ ನೀಡುವುದು ಅಗತ್ಯವಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕತೆಯಲ್ಲಿ ಏರಿಕೆಯಾಗಲಿದೆ ಎಂದು ಸಚಿವ ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದರು.
ಜಾಗತಿಕ ಆರ್ಥಿಕ ಬಿಕ್ಕಟ್ಟು ಕುರಿತಂತೆ ಮಾತನಾಡಿದ ಸಚಿವ ಚಿದಂಬರಂ, ನಾವು ಈಗಾಗಲೇ ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿದ್ದರಿಂದ ಜನತೆಗೆ ಮತ್ತೆ ಆರ್ಥಿಕ ಕುಸಿತದ ಆತಂಕ ಬೇಡ ಎಂದು ಹೇಳಿದರು. |