ಸಿಮ್ಲಾ : ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ದೇಶಿಯ ಬ್ಯಾಂಕ್ಗಳ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹೆಗಾರ ಸುರೇಶ್ ಡಿ.ತೆಂಡೂಲ್ಕರ್ ಹೇಳಿದ್ದಾರೆ.
ಜಾಗತಿಕ ಆರ್ಥಿಕ ಕುಸಿತ ದೇಶಧ ಬ್ಯಾಂಕ್ಗಳ ಆರ್ಥಿಕತೆಯ ಮೇಲೆ ಪ್ರಭಾವ ಬೀರಿಲ್ಲವಾದ್ದರಿಂದ ಬ್ಯಾಂಕ್ಗಳು ಆರ್ಥಿಕವಾಗಿ ಸದೃಢವಾಗಿವೆ ಎಂದು ಸುರೇಶ್ ತೆಂಡೂಲ್ಕರ್ ತಿಳಿಸಿದ್ದಾರೆ.
ಆದರೆ ಅಮೆರಿಕ ಯುರೋಪ್ , ರಾಷ್ಟ್ರಗಳ ಆರ್ಥಿಕ ಕುಸಿತದಿಂದಾಗಿ ದೇಶದ ರಫ್ತು ವಹಿವಾಟಿನ ಮೇಲೆ ಅಪಾರ ಪರಿಣಾಮವಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದ ಪರಿಸ್ಥಿತಿಯ ನಿರ್ಧಿಷ್ಟ ಅವಧಿಯನ್ನು ಹೇಳುವುದು ತುಂಬಾ ಕಠಿಣವಾಗಿದೆ.ಆರ್ಥಿಕ ಕುಸಿತದ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅಪೆಕ್ಸ್ ಸಮಿತಿಯನ್ನು ರಚಿಸಿದ್ದಾರೆ ಎಂದು ತೆಂಡೂಲ್ಕರ್ ತಿಳಿಸಿದರು. |