ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಪ್ಯಾಕೇಜ್: ಪ್ರಧಾನಿ ನೇತೃತ್ವದಲ್ಲಿ ಸಭೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ಯಾಕೇಜ್: ಪ್ರಧಾನಿ ನೇತೃತ್ವದಲ್ಲಿ ಸಭೆ
PTI
ದೇಶದ ಜನತೆಗೆ ಹೊಸ ವರ್ಷದ ಕೊಡುಗೆಯನ್ನು ನೀಡಲು ಕೇಂದ್ರ ಸರಕಾರ ಎರಡನೇ ಉತ್ತೇಜನ ಪ್ಯಾಕೇಜ್ ಸಿದ್ದಪಡಿಸುತ್ತಿರುವ ಹಿನ್ನೆಲೆಯಲ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ, ವಿತ್ತ ಸಚಿವಾಲಯದ ಉನ್ನತ ಅಧಿಕಾರಿಗಳು ಪ್ರಧಾನಿಯವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿತ್ತ ಸಚಿವಾಲಯದ ಕಾರ್ಯದರ್ಶಿ ಅರುಣ್ ರಾಮನಾಥನ್‌, ಸುಶ್ಮಾನಾಥ್ ಮತ್ತು ಕಂದಾಯ ಕಾರ್ಯದರ್ಶಿ ಪಿ.ವಿ. ಭಿಡೆ ಅವರನ್ನು ವಿತ್ತ ಖಾತೆಯನ್ನು ಕೂಡಾ ಹೊಂದಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸಭೆಗೆ ಆಗಮಿಸುವಂತೆ ಆದೇಶ ನೀಡಿದ್ದಾರೆ ಎಂದು ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಎರಡನೇ ಉತ್ತೇಜನ ಪ್ಯಾಕೇಜ್ ಸೇರಿದಂತೆ ರಿಸರ್ವ್ ಬ್ಯಾಂಕ್‌ ಕಡಿತ ಮಾಡಲು ಉದ್ದೇಶಿಸಿರುವ ರೆಪೊ, ರಿವರ್ಸ್ ರೆಪೊ ದರಗಳ ಕುರಿತಂತೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಕ್ಷೇತ್ರಗಳಿಗೆ ಸೂಕ್ತ ರೀತಿಯಲ್ಲಿ ಅನ್ವಯವಾಗುವಂತೆ ಎರಡನೇ ಉತ್ತೇಜನ ಪ್ಯಾಕೇಜ್ ಸಿದ್ದಪಡಿಸುತ್ತಿದ್ದು,ಮುಂಬರುವ ಕೆಲ ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಆಹ್ಲುವಾಲಿಯಾ ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಚ್ಚಾ ತೈಲ: ಪ್ರತಿ ಬ್ಯಾರೆಲ್‌ಗೆ 39 ಡಾಲರ್
3ಜಿ ಸ್ಪೆಕ್ಟ್ರಂ ಹರಾಜು ಮುಂದೂಡಿಕೆ
ಐಡಿಯಾ: ಕರ್ನಾಟಕದಲ್ಲಿ 300 ಕೋಟಿ ಹೂಡಿಕೆ
ಸತ್ಯಂ ಕಂಪ್ಯೂಟರ್ಸ್:ಮೂವರು ನಿರ್ದೇಶಕರ ರಾಜೀನಾಮೆ
ತೈಲ ದರ ಇಳಿಕೆಗೆ ಸರಕಾರ ನಿರ್ಧಾರ:ದೇವ್ರಾ
ಜನೆವರಿಯಿಂದ ವಿಮಾನ ಪ್ರಯಾಣ ದರ ಕಡಿತ