ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸತ್ಯಂ ಪುನಶ್ಚೇತನ: ಪ್ರಧಾನಿ ನೇತೃತ್ವದಲ್ಲಿ ಸಭೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸತ್ಯಂ ಪುನಶ್ಚೇತನ: ಪ್ರಧಾನಿ ನೇತೃತ್ವದಲ್ಲಿ ಸಭೆ
PTI
ಸತ್ಯಂ ಹಗರಣ ಕುರಿತಂತೆ ಚರ್ಚಿಸಲು ಫ್ರಧಾನಿ ಮನಮೋಹನ್ ಸಿಂಗ್ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಂಪುಟ ಸದಸ್ಯರಾದ ಗೃಹ ಸಚಿವ ಚಿದಂಬರಂ , ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ , ವಾಣಿಜ್ಯ ಸಚಿವ ಕಮಲ್‌ನಾಥ್ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಸತ್ಯಂ ಕಂಪ್ಯೂಟರ್ ಸಂಸ್ಥೆಯಲ್ಲಿ 7 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣ ಕುರಿತಂತೆ ಚರ್ಚಿಸುವುದು ಸಭೆಯ ಮುಖ್ಯ ಉದ್ದೇಶವಾಗಿದ್ದು, ಸತ್ಯಂ ಪುನಶ್ಚೇತನಕ್ಕಾಗಿ ಸರಕಾರ ಆರ್ಥಿಕ ಸಹಾಯ ಸೇರಿದಂತೆ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ದವಾಗಿದೆ ಎಂದು ವಾಣಿಜ್ಯ ಸಚಿವ ಕಮಲ್‌ನಾಥ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಉನ್ನತ ಮಟ್ಟದ ಸಭೆ ನಡೆಯುವುದಕ್ಕಿಂತ ಮುಂಚೆ ಪ್ರಧಾನಿ ಮನಮೋಹನ್ ಸಿಂಗ್ ವಾಣಿಜ್ಯ ಸಚಿವ ಕಮಲ್‌ನಾಥ್ ಅವರೊಂದಿಗೆ ಸತ್ಯಂ ಹಗರಣದ ವಿವರಗಳನ್ನು ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಅಪರಾಧ ತನಿಖಾ ತಂಡ ಪ್ರೈಸ್ ವಾಟರ್‌ಹೌಸ್ ಕೂಪರ್ಸ್‌ ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದು, ಸತ್ಯಂನ ಸ್ವತಂತ್ರ ನಿರ್ದೇಶಕರಾಗಿದ್ದ ರಾಮ್‌ಮೋಹನ್ ರಾವ್‌ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ

ಸತ್ಯಂನ ಮಾಜಿ ಮಧ್ಯಂತರ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಮ್ ಮೈನಾಮ್‌ಪತಿಯವರನ್ನು ಕೂಡಾ ಸಿಐಡಿ ವಿಭಾಗದ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮತ್ತಷ್ಟು ಪ್ಯಾಕೇಜ್‌ಗಳ ಘೋಷಣೆ: ಕಮಲ್‌ನಾಥ್
ಸತ್ಯಂನ ಇಎಂಆರ್‌ಐ ಮಂಡಳಿಗೆ ಕಲಾಂ ರಾಜೀನಾಮೆ
ಹಿರಿಯ ಉದ್ಯಮಿಗಳಿಂದ ಪ್ರಧಾನಿ ಭೇಟಿ
ಜ.15 ರಂದು ಪೆಟ್ರೋಲ್, ಡೀಸೆಲ್‌ ದರ ಕಡಿತ ಸಾಧ್ಯತೆ?
ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ
ಇನ್ಫೋಸಿಸ್‌ಗೆ 1,641 ಕೋಟಿ ನಿವ್ವಳ ಲಾಭ