ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸತ್ಯಂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ :ಪ್ರಣಬ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸತ್ಯಂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ :ಪ್ರಣಬ್
ನವದೆಹಲಿ : ಆಂಧ್ರಪ್ರದೇಶದ ಸರಕಾರ ಸತ್ಯಂ ಹಗರಣವನ್ನು ಲಘುವಾಗಿ ಪರಿಗಣಿಸುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ವಿತ್ತ ಸಚಿವ ಪ್ರಣಬ್ ಮುಖರ್ಜಿ ಮಾತನಾಡಿ, ಸತ್ಯಂ ಅವ್ಯವಹಾರವನ್ನು ಸಂಪೂರ್ಣ ತನಿಖೆಗೆ ಒಳಪಡಿಸಿ ಆರೋಪಿಗಳನ್ನು ಖಂಡಿತವಾಗಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಸತ್ಯಂ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.ತಪ್ಪು ಮಾಡುವವರನ್ನು ಸರಕಾರ ರಕ್ಷಿಸಲು ಪ್ರಯತ್ನಿಸುವುದಿಲ್ಲ ಎಂದು ಸಚಿವ ಮುಖರ್ಜಿ ಪ್ರಶ್ನೋತ್ತರ ಸಭೆಯಲ್ಲಿ ತಿಳಿಸಿದ್ದಾರೆ.

ಕಂಪೆನಿ ವೃತ್ತಿಪರವಾಗಿ ಮುಂದುವರಿದಲ್ಲಿ ಅಂತಾರಾಷ್ಟ್ರೀಯ ಗ್ರಾಹಕರು ಬೆಂಬಲ ನೀಡಲು ಸಿದ್ದರಾಗಿದ್ದಾರೆ ಎಂದು ಸಚಿವ ಮುಖರ್ಜಿ ಹೇಳಿದ್ದಾರೆ.

ಆಂಧ್ರಪ್ರದೇಶ ಸರಕಾರದ ಶಿಫಾರಸಿನ ಮೇರೆಗೆ ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ಸಂಪೂರ್ಣ ತನಿಖೆ ಮುಕ್ತಾಯವಾಗುವವರೆಗೆ ನಿರೀಕ್ಷಿಸಬೇಕಾಗುತ್ತದೆ ಎಂದು ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶೇ3.92ಕ್ಕೆ ಇಳಿಕೆಯಾದ ಹಣದುಬ್ಬರ ದರ
ಅಂಬರಕ್ಕೇರಿದ ಚಿನ್ನದ ದರ ಪ್ರತಿ 10ಗ್ರಾಂಗೆ 15,712 ರೂ.
ಪ್ರತಿ ತಿಂಗಳು 10 ಮಿಲಿಯನ್ ಸಂಪರ್ಕ :ಎರಿಕ್ಸನ್
ಕಚ್ಚಾ ತೈಲ ದರ ಇಳಿಕೆ
ಫಾರೆಕ್ಸ್ : ರೂಪಾಯಿ ಮೌಲ್ಯ ಏರಿಕೆ
ಗಣಿತಶಾಸ್ತ್ರ ಇನ್ಪೋಸಿಸ್ ಪ್ರಶಸ್ತಿ