ಕೇಂದ್ರದಲ್ಲಿ ಯುಪಿಎ ಸರಕಾರ ಮರಳಿ ಅಧಿಕಾರಕ್ಕೆ ಬಂದಲ್ಲಿ 100 ದಿನಗಳೊಳಗಾಗಿ ಉತ್ತೇಜನ ಪ್ಯಾಕೇಜ್ಗಳನ್ನು ಘೋಷಿಸಿ ಉದ್ಯೋಗ ನಷ್ಟವನ್ನು ತಡೆದು ಆರ್ಥಿಕತೆಯನ್ನು ಪರಿಷ್ಕರಿಸಲಾಗುವುದು ಎಂದು ಖ್ಯಾತ ಆರ್ಥಿಕ ತಜ್ಞರಾದ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ದೇಶದ ವೃದ್ಧಿ ದರವನ್ನು ಶೇ.9 ರಿಂದ ಶೇ.10ಕ್ಕೆ ತಲುಪಿಸುವ ನಿಟ್ಟಿನಲ್ಲಿ ಉತ್ತೇಜನ ಪ್ಯಾಕೇಜ್ಗಳನ್ನು ಘೋಷಿಸುವುದರಿಂದ ಆರ್ಥಿಕತೆಯನ್ನು ಸುಸ್ಥಿತಿಗೆ ತರಬಹುದಾಗಿದೆ ಎಂದು ಹೇಳಿದ್ದಾರೆ. ಶೀಘ್ರದಲ್ಲಿ ಆರ್ಥಿಕತೆಯನ್ನು ಮರಳಿ ಸುಸ್ಥಿತಿಗೆ ಬಂದು ಸಿಮೆಂಟ್ ,ಜವಳಿ, ಕಟ್ಟಡ ನಿರ್ಮಾಣ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ನೂತನ ಉದ್ಯೋಗಗಳ ಸೃಷ್ಟಿಯಾಗುವ ಬಗ್ಗೆ ಆಶಾಭಾವನೆಗಳನ್ನು ಹೊಂದಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ. 100 ದಿನಗಳ ಕಾರ್ಯವ್ಯಾಪ್ತಿಯಲ್ಲಿ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ನಿಂದ ಮರಳಿ ಸ್ವದೇಶಕ್ಕೆ ತರಲು ಅಗತ್ಯವಾಗಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಬಿಜೆಪಿ ನಾಯಕ ಅಡ್ವಾಣಿಯವರ ಹೇಳಿಕೆಯನ್ನು ತಳ್ಳಿಹಾಕುವುದಿಲ್ಲ.ಆದರೆ ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪುಹಣದ ಮೊತ್ತದ ಬಗ್ಗೆ ಸಂಪೂರ್ಣ ವಿವರಗಳ ಬಗ್ಗೆ ಮಾಹಿತಿಯಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. |