ದೇಶದ ಸಣ್ಣ ಮತ್ತು ಮಧ್ಯಮ ಕ್ಷೇತ್ರದ ಕೈಗಾರಿಕೆಗಳಿಗೆ ಸಾಲ ನೀಡಿಕೆಯಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಕೇಂದ್ರ ರಿಸರ್ವ್ ಬ್ಯಾಂಕ್ ಸಾರ್ವಜನಿಕ ಹಾಗೂ ಖಾಸಗಿ ಕ್ಷೇತ್ರದ ಬ್ಯಾಂಕ್ಗಳಿಗೆ ಮನವಿ ಮಾಡಿದೆ.
ಸಣ್ಣ ಮತ್ತು ಮಧ್ಯಮ ಕ್ಷೇತ್ರದ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ಸಾಲದ ಮರುಪಾವತಿಯ ಅವಧಿ ವಿಸ್ತರಣೆ ಮತ್ತು ನೀತಿಗಳ ಪರಿಷ್ಕರಣೆ ನಡೆಸಬೇಕು ಎಂದು ಆರ್ಬಿಐ ಬ್ಯಾಂಕ್ಗಳಿಗೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ರಿಸರ್ವ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಮುಖ್ಯಸ್ಥ ಕೆ.ಸಿ.ಚಕ್ರವರ್ತಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು,ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡುವಂತೆ ಆದೇಶಿಸಿದೆ.
ಸಮಿತಿಯ ಶಿಫಾರಸಿನ್ ಮೇರೆಗೆ ಸಣ್ಣ ಮತ್ತು ಮಧ್ಯಮ ಕ್ಷೇತ್ರದ ಕೈಗಾರಿಕೆಗಳಿಗೆ ಸಾಲ ವಿತರಣೆ ಹಾಗೂ ಇತರ ಸೌಲಭ್ಯಗಳಿಗಾಗಿ ಕೇಂದ್ರ ಸರಕಾರ ,ರಾಜ್ಯ ಸರಕಾರಗಳು ಮತ್ತು ವಾಣಿಜ್ಯ ಬ್ಯಾಂಕ್ಗಳಿಗೆ ಶಿಫಾರಸಿನ ವರದಿಯನ್ನು ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. |