ಕೇಂದ್ರ ಯೋಜನಾ ಆಯೋಗ 11ನೇ ಪಂಚವಾರ್ಷಿಕ ಯೋಜನೆಯ ಮಧ್ಯಂತರ ಅವಧಿಯ ಪರಿಶೀಲನಾ ಕಾರ್ಯ ಮುಂದುವರಿಸಿದ್ದು, ನೂತನ ಸಮಿತಿ ಅದನ್ನು ಮುಂದುವರಿಸಿಕೊಂಡು ಹೋಗಲಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.
11 ನೇ ಪಂಚವಾರ್ಷಿಕ ಯೋಜನೆಯ ಮಧ್ಯಂತರ ಅವಧಿಯ ಪರಿಶೀಲನೆ ಕಾರ್ಯವನ್ನು ಆರಂಭಿಸಲಾಗಿತ್ತು, ಆದರೆ ನೂತನ ಆಯೋಗ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಯವನ್ನು ಮುಂದುವರಿಸಿಕೊಂಡು ಹೋಗಲಿದೆ ಎಂದು ಮೊಂಟೆಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಯೋಜನೆಯ ಮಧ್ಯಂತರ ಪರಿಶೀಲನೆ ಅಗತ್ಯವಾಗಿದ್ದು, ಜಾಗತಿಕ ಆರ್ಥಿಕ ಕುಸಿತದಿಂದಾಗಿ ದೇಶದ ಅಭಿವೃದ್ಧಿ ದರವನ್ನು ಶೇ.9ಕ್ಕೆ ತಲುಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇ.9 ರಿಂದ ಶೇ.6.5 ರಿಂದ ಶೇ.6.7ಕ್ಕೆ ಇಳಿಕೆಯಾಗಲಿದೆ ಎಂದು ಅಂದಾಜು ಮಾಡಿದೆ. |