ವೋಲ್ವೊ ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದು, ನಗರದಲ್ಲಿ ಸಂಚರಿಸುತ್ತಿದ್ದ ಮಾರ್ಕೊಪೊಲೋ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.
ಮಾರ್ಕೊಪೊಲೋ ಬಸ್ಗಳು ಹೆಚ್ಚು ಶಬ್ಬ ಮಾಡುತ್ತಿದ್ದುದರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಹುದು ಎನ್ನುವ ಕಾರಣಕ್ಕೆ ಸ್ಥಗಿತಗೊಳಿಸಲಾಗಿದ್ದು, ಬಸ್ಗಳನ್ನು ಆಧುನೀಕರಣಗೊಳಿಸಿ ಸಂಚಾರಕ್ಕೆ ಬಿಡಲಾಗುವುದು ಎಂದರು.
ಶಾಂತಿನಗರ ಬಸ್ ನಿಲ್ದಾಣದಲ್ಲಿ ನರ್ಮ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರು ಕೂಡ ವೋಲ್ವೊ ಬಸ್ಸಿನಲ್ಲಿ ಪ್ರಯಾಣ ಮಾಡಬೇಕೆನ್ನುವುದೇ ಉದ್ದೇಶ. ಹಾಗಾಗಿ ವೋಲ್ವೊ ಬಸ್ ದರ ಕಡಿಮೆ ಮಾಡಲು ನಿರ್ಧರಿಸಲು ಮುಂದಾಗಿರುವುದಾಗಿ ತಿಳಿಸಿದರು.
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿಯಲ್ಲಿ ತರಬೇತಿ ನೌಕರರ ವೇತನವನ್ನು ಹೆಚ್ಚಳ ಮಾಡಲಾಗಿದೆ. ಅವರಿಗೆ ಇನ್ನಷ್ಟು ಸೌಲಭ್ಯ ನೀಡುವ ಗುರಿ ಇದೆ ಎಂದು ಅಶೋಕ್ ವಿವರಿಸಿದರು. |