ನೂತನವಾಗಿ ಅಧಿಕಾರದ ಗದ್ದುಗೆ ಏರಲಿರುವ ಯುಪಿಎ ಮೈತ್ರಿಕೂಟ 45ದಿನಗಳೊಳಗೆ 2009-10ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಮೂಲಕ ಮತ್ತಷ್ಟು ಉದ್ಯೋಗಾವಕಾಶ ಹಾಗೂ ಹೂಡಿಕೆಗೆ ಹೆಚ್ಚಿನ ಒತ್ತು ನೀಡಲಿದೆ ಎಂಬ ನಿರೀಕ್ಷೆಯಲ್ಲಿರುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಚೇತರಿಕೆಗಾಗಿ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಆರ್ಥಿಕ ಪ್ಯಾಕೇಜ್ ಬಹಳಷ್ಟು ಕಡಿಮೆಯಾಗಿದೆ, ಆ ನಿಟ್ಟಿನಲ್ಲಿ ನೂತನ ಸರ್ಕಾರ ಮತ್ತಷ್ಟು ಆರ್ಥಿಕ ಚೇತರಿಕೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಖ್ಯಾತ ಆರ್ಥಿಕ ತಜ್ಞ ಮೇಘನಾದ ದೇಸಾಯ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಹಿಂಜರಿತದ ಹೊಡೆತ ಇನ್ನೂ ಮುಂದುವರಿದೆ ಎಂದಿರುವ ದೇಸಾಯ್, ಆರ್ಥಿಕ ಹೊಡೆತವನ್ನು ತಡೆಗಟ್ಟಲು ಸರ್ಕಾರ ಸಾಕಷ್ಟು ಬಿಗು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ನಿಗದಿತ ಸಮಯವನ್ನು ನಿಗದಿ ಮಾಡದೆ, ಆರ್ಥಿಕ ಚೇತರಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕಾದ್ದು ಮುಖ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
|