ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶಕ್ಕೆ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ಸುಸ್ಥಿತಿಗೆ ತರುವುದು ನೂತನ ಯುಪಿಎ ಸರಕಾರದ ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಸುದ್ದಿಗಾರರಿಗೆ ಹೇಳಿದ್ದಾರೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಕುಸಿತ ಎದುರಾಗಿದ್ದರಿಂದ ದೇಶದ ಅಭಿವೃದ್ಧಿಯನ್ನು ಮುಂದುವರಿಸಿಕೊಂಡು ಹೋಗುವುದು ಅಗತ್ಯವಾಗಿದೆ. ಆರ್ಥಿಕತೆಯನ್ನು ಸುಸ್ಥಿತಿಗೆ ತಂದು ಅಭಿವೃದ್ಧಿಯತ್ತ ಗಮನಹರಿಸುವುದು ನೂತನ ಸರಕಾರದ ಪ್ರಥಮ ಗುರಿಯಾಗಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್, ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ಹೇಳಿದ್ದಾರೆ. |