ಲೀಡ್ ಬ್ಯಾಂಕ್ಗಳು ಪ್ರತಿ ತ್ರೈಮಾಸಿಕ ಅವಧಿಯಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಗ್ರಾಹಕರ ಸಾರ್ವಜನಿಕ ಸಭೆಯನ್ನು ಆಯೋಜಿಸಬೇಕು ಎಂದು ರಿಸರ್ವ್ ಬ್ಯಾಂಕ್ನ ಉನ್ನತ ಮಟ್ಟದ ಸಮಿತಿ ಬ್ಯಾಂಕ್ಗಳಿಗೆ ಸಲಹೆ ನೀಡಿದೆ.
ರಿಸರ್ವ್ ಬ್ಯಾಂಕ್ನ ಡೆಪ್ಯೂಟಿ ಗೌವರ್ನರ್ ಉಷಾ ಥೋರಟ್ ನೇತೃತ್ವದ ಸಮಿತಿ, ಲೀಡ್ ಬ್ಯಾಂಕ್ಗಳು ಪ್ರತಿ ತ್ರೈಮಾಸಿಕ ಅವಧಿಯಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಗ್ರಾಹಕರ ಸಾರ್ವಜನಿಕ ಸಭೆಯನ್ನು ಆಯೋಜಿಸಿ ಬ್ಯಾಂಕ್ಗಳ ಕುರಿತಂತೆ ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು ಎಂದು ಸಲಹೆ ನೀಡಿದೆ.
ಲೀಡ್ ಬ್ಯಾಂಕ್ಗಳು ರಿಸರ್ವ್ ಬ್ಯಾಂಕ್ ಪ್ರಾಯೋಜಿತವಾಗಿದ್ದು, ಗ್ರಾಮೀಣ ನಗರಗಳಲ್ಲಿ ಬ್ಯಾಂಕಿಂಗ್ ಸೇವೆಗಳು ಹಾಗೂ ಆರ್ಥಿಕ ಸಾಕ್ಷರತೆಯನ್ನು ಗ್ರಾಹಕರಿಗೆ ನೀಡುವುದು ಅಗತ್ಯವಾಗಿದೆ ಎಂದು ಸಮಿತಿ ಬ್ಯಾಂಕ್ಗಳಿಗೆ ಆದೇಶ ನೀಡಿದೆ.
ಬ್ಯಾಂಕ್ಗಳು ತ್ರೈಮಾಸಿಕ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸುವುದರಿಂದ ಗ್ರಾಹಕರ ಕುಂದು ಕೊರತೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ನ ಪ್ರಾದೇಶಿಕ ನಿರ್ದೇಶಕ ಜೆ. ಸದಕ್ಕುಡ್ಲಾ ಹೇಳಿದ್ದಾರೆ.
ಸಾರ್ವಜನಿಕ ಸಭೆಗೆ ಜಿಲ್ಲಾ ನ್ಯಾಯಾಧೀಶ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸುವುದು ಅಗತ್ಯವಾಗಿದ್ದು, ಇತರ ಬ್ಯಾಂಕ್ಗಳ ವ್ಯವಸ್ಥಾಪಕರು ಉಪಸ್ಥಿತರಿರಬೇಕು ಎಂದು ಸಮಿತಿ ಲೀಡ್ ಬ್ಯಾಂಕ್ಗಳಿಗೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. |