ರಾಜ್ಯದಲ್ಲಿ ಅಹಾರ ಸಂಸ್ಕರಣ ಕೈಗಾರಿಕೋದ್ಯ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲು ಕೃಷಿ ಆಧಾರಿತ ಕೈಗಾರಿಕೆ ನೀತಿಯನ್ನು ಜಾರಿಗೆ ತರಲು ಸರಕಾರ ಯೋಜನೆಯನ್ನು ರೂಪಿಸಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದ್ದು, ಅಹಾರ ಸಂಸ್ಕರಣ ಕೈಗಾರಿಕೋದ್ಯಮದ ಜೊತೆಗೆ ಮಾರ್ಕೆಂಟಿಗ್ ಮತ್ತು ಪ್ಯಾಕೇಜಿಂಗ್ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುತ್ತದೆ ಎಂದು ಕೃಷಿ ಇಲಾಖೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಸಸಿನೆಡುವ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಖಾಸಗಿ ಕ್ಷೇತ್ರಗಳ ಪರಿಸರವಾದಿಗಳಿಗೆ ಗ್ರಾಮೀಣ ಕ್ಷೇತ್ರಗಳಲ್ಲಿ ಗಿಡನೆಡುವ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮನವಿ ಮಾಡಿದ್ದಾರೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ. |