ಅಗತ್ಯ ವಸ್ತುಗಳ ದರಗಳಲ್ಲಿ ಇಳಿಕೆ ಆರಂಭದ ಮಧ್ಯೆಯು ಹಣದುಬ್ಬರ ಏರಿಕೆ ಕಳವಳ ಮೂಡಿಸಿದ್ದು, ಹಣದುಬ್ಬರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಹಣದುಬ್ಬರ ಗರಿಷ್ಠ ಏರಿಕೆ ಕಂಡು ಕಳವಳಕ್ಕೆ ಕಾರಣವಾಗಿದೆ. ಹಣದುಬ್ಬರ ನಿಯಂತ್ರಣಕ್ಕಾಗಿ ಆರ್ಥಿಕ ನೀತಿಗಳಲ್ಲಿ ಬದಲಾವಣೆ ಅಗತ್ಯವಾಗಿದೆ.ಆದರೆ ಮುಂಬರುವ ದಿನಗಳಲ್ಲಿ ಹಣದುಬ್ಬರ ಇಳಿಕೆಯಾಗಲಿದೆ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ತಿಳಿಸಿದ್ದಾರೆ.
ಏಪ್ರಿಲ್ 20ರಂದು ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ನೀತಿಗಳ ಪರಿಷ್ಕರಣ ಸಭೆ ನಡೆಸಲಿದ್ದು,ರೆಪೋ ದರಗಳನ್ನು ಹೆಚ್ಚಿಸುವ ಸಾಧ್ಯತೆಗಳಿವೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.