ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗಾವಕಾಶಗಳ ಸೃಷ್ಟಿಗಾಗಿ ಸುವರ್ಣ ವಸ್ತ್ರ ನೀತಿ ಯೋಜನೆಯಡಿ ಕರ್ನಾಟಕ ಸರಕಾರವು 500 ಕೋಟಿ ರೂ. ವ್ಯಯಿಸಲಿದೆ ಎಂದು ರಾಜ್ಯದ ಜವಳಿ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಅವರು ಶುಕ್ರವಾರ, ಗಿರಿಜನ ಉಪಯೋಜನೆಯಡಿಯಲ್ಲಿ ಸೌರ ಮನೆದೀಪಗಳು ಹಾಗೂ ಬೀದಿ ದೀಪಗಳ ಯೋಜನೆ ಉದ್ಘಾಟಿಸಿ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಈ ಗ್ರಾಮೀಣ ತರಬೇತಿ ಯೋಜನೆಯನ್ನು ಸದ್ಯಕ್ಕೆ ಬಾವಡಿ, ಹಾರ, ಹೊಸಬಾಳ ಮತ್ತು ಕಬ್ಬಿನಾಲೆ ಎಂಬ ನಕ್ಸಲ್ ಪೀಡಿತ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.