ಮುಖ್ಯ ಪುಟ > ಸುದ್ದಿ ಜಗತ್ತು > ಚುನಾವಣೆ > ಚುನಾವಣೆ-08 > ಮೆಹಬೂಬಾ ಮುಫ್ತಿ ಬೆಂಗಾವಲು ಪಡೆ ಮೇಲೆ ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೆಹಬೂಬಾ ಮುಫ್ತಿ ಬೆಂಗಾವಲು ಪಡೆ ಮೇಲೆ ದಾಳಿ
ಜಮ್ಮು ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬೆಂಗಾವಲು ಪಡೆಗಳ ಮೇಲೆ ಕೆಲ ಉದ್ರಿಕ್ತ ಗುಂಪುಗಳು ದಾಳಿ ನಡೆಸಿದಾಗ ಮೂವರು ಭದ್ರತಾ ಪಡೆಗಳ ಸದಸ್ಯರು ಗಾಯಗೊಂಡಿದ್ದು ಮೂರು ವಾಹನಗಳನ್ನು ನಾಶಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾರಾಮುಲ್ಲಾ ಪಟ್ಟಣದಲ್ಲಿ ಹಿಂದಿನ ದಿನ ಭದ್ರತಾ ಪಡೆಗಳ ಗೋಲಿಬಾರ್‌ನಲ್ಲಿ ಇಬ್ಬರು ಯುವಕರು ಹತ್ಯೆಯಾದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪುಗಳು ಕುಪ್ವಾರಾ ಜಿಲ್ಲೆಯಲ್ಲಿ ಇಂದು ಮೆಹಬೂಬಾ ಮುಫ್ತಿ ಚುನಾವಣಾ ಪ್ರಚಾರವನ್ನು ಅಂತ್ಯಗೊಳಿಸಿ ಬಾರಾಮುಲ್ಲಾ ಮಾರ್ಗವಾಗಿ ಮರಳುತ್ತಿರುವ ಸಂದರ್ಭದಲ್ಲಿ ವಾಹನಗಳನ್ನು ತಡೆದು ಬೆಂಕಿ ಹಚ್ಚಿದ್ದಲ್ಲದೇ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಘಟನೆಯಲ್ಲಿ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅಂಗರಕ್ಷಕರ ಸಹಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಮೂವರು ಭದ್ರತಾ ಪಡೆಗಳ ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜಮ್ಮು ಕಾಶ್ಮೀರ: ಎರಡನೇ ಹಂತದ ಮತದಾನ ಆರಂಭ
ಛತ್ತೀಸ್‌ಗಢ: 478 ಮತದಾರರು 510 ಮತಗಳು!
'ಮದರ್ ಥೆರೆಸಾ'-ಚೋಟೇ ಭಯ್ಯಾ ನಡುವೆ ಹಣಾಹಣಿ
ದೆಹಲಿ, ಛತ್ತೀಸ್, ಎಂಪಿಯಲ್ಲಿ ಬಿಜೆಪಿ ಮುನ್ನಡೆ
ಛತ್ತೀಸ್‌ಗಢ: ದ್ವಿತೀಯ ಹಂತದಲ್ಲಿ ಶೇ.68 ಮತದಾನ
ಮಿಲಿಯಾಧಿಪತಿಗಳು, ಕ್ರಿಮಿನಲ್‌ಗಳು ಛತ್ತೀಸ್‌ಗಢ ಕಣದಲ್ಲಿ