ವಿಶೇಷ ವರದಿ: ನ್ಯೂಸ್ ರೂಂ ನಿನ್ನೆ ನಗರಕ್ಕೆ ಆಗಮಿಸಿದ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಷ್ಟ್ತ್ರೀಯ ಅಧ್ಯಕ್ಷ ಶಹನವಾಜ್ ಹುಸೇನ್ರವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮುಸ್ಲಿಮರು ಬಿಜೆಪಿಯ ಕಡೆಗೆ ಆಕರ್ಷಿತರಾಗುತ್ತಿದ್ದಾರೆ ಎಂಬ ಮಾತುಗಳನ್ನಾಡಿದ್ದಾರೆ. ಮೇ ಅಂತ್ಯದಲ್ಲಿ ಚುನಾವಣೆಗಳು ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ.ಹೆಸರು ಹೇಳಲು ಇಚ್ಛಿಸದ ರಾಜಕೀಯ ಪಕ್ಷದ ಮುಖಂಡರೊಬ್ಬರು ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ: