ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ
 
ಇಮ್ರಾನ್ ವಿರುದ್ಧ ಗಂಭೀರ ಭಯೋತ್ಪಾದನೆ ಆರೋಪ
ತುರ್ತು ಪರಿಸ್ಥಿತಿ ವಿರುದ್ಧ ಪ್ರತಿಭಟನೆ ನಡೆಸುವ ಮತ್ತು ವಿರೋಧೀ ಹೇಳಿಕೆ ನೀಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ತನ್ನ ಕಾರ್ಯಾಚರಣೆ ಮುಂದುವರಿಸಿರುವ ಪಾಕಿಸ್ತಾನದ ಮಿಲಿಟರಿ ಆಡಳಿತಗಾರ ಜನರಲ್ ಪರ್ವೇಜ್ ಮುಷರಫ್ ಹಿಡಿತದ ಸರಕಾರವು, ಕ್ರಿಕೆಟ್ ದಂತಕಥೆ ಮತ್ತು ರಾಜಕಾರಣಿ ಇಮ್ರಾನ್ ಖಾನ್ ಅವರ ವಿರುದ್ಧ ಅತ್ಯಂತ ಗಂಭೀರವಾದ ಭಯೋತ್ಪಾದನೆ-ವಿರೋಧಿ ಕಾಯಿದೆ ಪ್ರಯೋಗಿಸಿದೆ.

ಈ ನಡುವೆ ಮಾಜಿ ಪ್ರಧಾನಿ ಬೇನಜೀರ್ ಭುಟ್ಟೋ ಅವರ ಗೃಹಬಂಧನವು ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಮ್ರಾನ್ ವಿರುದ್ಧ ಪ್ರಯೋಗಿಸಲಾಗಿರುವ ಕಾಯಿದೆಯು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗಬಹುದಾದ ಕಠಿಣತಮ ಕಾಯಿದೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನವೆಂಬರ್ 3ರಂದು ತುರ್ತು ಪರಿಸ್ಥಿತಿ ಹೇರಿದಂದಿನಿಂದ ಬಂಧನ ಭೀತಿಯಿಂದ ಭೂಗತರಾಗಿದ್ದ ಇಮ್ರಾನ್, ಲಾಹೋರಿನ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ನಡೆಸಲಾದ ವಿದ್ಯಾರ್ಥಿಗಳ ಪ್ರತಿಭಟನಾ ರಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಲ್ಲಿ ಅವರನ್ನು ತೀವ್ರಗಾಮಿ ವಿದ್ಯಾರ್ಥಿ ಮುಖಂಡರು ಪತ್ತೆ ಹಚ್ಚಿ ಪೊಲೀಸರ ಕೈಗೊಪ್ಪಿಸಿದರು. ಆ ಬಳಿಕ ಅವರನ್ನು ನಿಗೂಢ ತಾಣಕ್ಕೆ ಕರೆದೊಯ್ಯಲಾಯಿತು ಎಂದು ಇಲ್ಲಿನ ಟಿವಿ ಚಾನೆಲ್‌ಗಳು ವರದಿ ಮಾಡಿವೆ.

ತೆಹ್ರೀಕ್ ಎ ಇನ್ಸಾಫ್ ಪಕ್ಷದ ಮುಖಂಡ ಇಮ್ರಾನ್ ಖಾನ್ ಅವರನ್ನು ಪೊಲೀಸರಿಗೊಪ್ಪಿಸುವ ಮುನ್ನ ತೀವ್ರಗಾಮಿ ಜಮಾತೆ ಇಸ್ಲಾಮಿಯ ವಿದ್ಯಾರ್ಥಿ ಘಟಕವಾದ ಇಸ್ಲಾಮಿ ಜಮಾತೆ ತಲಾಬಾ ಸದಸ್ಯ ವಿದ್ಯಾರ್ಥಿಗಳು ಸುಮಾರು 90 ನಿಮಿಷ ಕಾಲ ಕೊಠಡಿಯಲ್ಲಿ ಕೂಡಿ ಹಾಕಿದ್ದರು.
ಮತ್ತಷ್ಟು
ಸ್ವಾಟ್‌ನಲ್ಲಿ 16 ಉಗ್ರಗಾಮಿಗಳ ಹತ್ಯೆ
ಪಾಕ್ ಸಂಸತ್ತು ನಾಳೆ ವಿಸರ್ಜನೆ -ಅಜೀಮ್
ಇಮ್ರಾನ್ ಖಾನ್ ಪೊಲೀಸ್ ವಶಕ್ಕೆ
ವೇಳಾಪಟ್ಟಿ ನಿಗದಿಗೆ ಚುನಾವಣಾ ಆಯೋಗ ಸಭೆ
ರಾಜೀನಾಮೆಗೆ ಆಗ್ರಹಿಸುವ ಹಕ್ಕಿಲ್ಲ: ಮುಷರ್ರಫ್
ನವಾಜ್‌ಷರೀಫ್ ಜತೆ ಪಾಕ್ ಮಾತುಕತೆ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com