ಬಾಂಗ್ಲಾ ಸಂಸ್ಥಾಪಕ ಮುಜಿಬುರ್ ರೆಹಮಾನ್ ಮತ್ತು ಕುಟುಂಬಿಕರ ಹತ್ಯೆ ಪ್ರಕರಣದ ಐದು ಮಂದಿ ಆರೋಪಿಗಳು ತಮಗೆ ವಿಧಿಸಿದ್ದ ಮರಣದಂಡನೆಯನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮನವಿಯನ್ನು ಬುಧವಾರ ತಿರಸ್ಕರಿಸಿದ್ದು, ತೀರ್ಪನ್ನು ಎತ್ತಿ ಹಿಡಿದಿದೆ.
ಬಾಂಗ್ಲಾ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಮೊಹಮ್ಮದ್ ತಫಾಜ್ಜುಲ್ ಇಸ್ಲಾಮ್ ಅವರ ನೇತೃತ್ವದ ಪೀಠ, ಮುಜಿಬುರ್ ಹತ್ಯೆ ಕುರಿತಂತೆ ಸತತ ಮೂರು ದಿನಗಳ ಕಾಲ ನಡೆದ ವಿಚಾರಣೆಯ ನಂತರ ಆರೋಪಿಗಳಿಗೆ ವಿಧಿಸಿದ್ದ ಮರಣದಂಡನೆ ತೀರ್ಪನ್ನು ಎತ್ತಿಹಿಡಿದಿದೆ.
ಬಾಂಗ್ಲಾದ ಸಂಸ್ಥಾಪಕ ಮುಜಿಬುರ್ ರೆಹಮಾನ್ ಅವರ ಹತ್ಯೆ ಪ್ರಕರಣದ 12ಮಂದಿ ಆರೋಪಿಗಳಲ್ಲಿ ಐದು ಮಂದಿ ಗಲ್ಲು ಶಿಕ್ಷೆಗೆ ಒಳಗಾಗಿದ್ದು, ಇದೀಗ ಜೈಲಿನಲ್ಲಿರುವ ಐದು ತಮಗೆ ವಿಧಿಸಿದ್ದ ಮರಣದಂಡನೆ ಕುರಿತು ಪುನರ್ ಪರಿಶೀಲನೆ ನಡೆಸಬೇಕೆಂದು ಕೋರಿ ಸುಪ್ರೀಂಗೆ ಸಲ್ಲಿಸಿದ್ದ ಮನವಿ ವಜಾಗೊಂಡಿದೆ.