ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಮಾನ ದುರಂತ:ಪಾಕ್‌ನಿಂದ ಸಂತಾಪ ಸಂದೇಶ ರವಾನೆ (Plane crash | Pakistan | Condolences | India | Karnataka | Manmohan Singh)
Bookmark and Share Feedback Print
 
ಮಂಗಳೂರಿನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ, 159 ಪ್ರಯಾಣಿಕರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನ, ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶೋಕ ಸಂದೇಶವನ್ನು ರವಾನಿಸಿದೆ.

ಕರ್ನಾಟಕ ರಾಜ್ಯದ ಮಂಗಳೂರಿನಲ್ಲಿ ಸಂಭವಿಸಿದ ವಿಮಾನ ದುರಂತದಿಂದಾಗಿ, ಹಲವಾರು ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಭಾರಿ ಆಘಾತಗೊಂಡಿದ್ದೇನೆ ಎಂದು ಪ್ರಧಾನಿ ಗಿಲಾನಿ ಕಳುಹಿಸಿದ ಶೋಕ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಸರಕಾರದ ಪರವಾಗಿ ಹಾಗೂ ಪಾಕಿಸ್ತಾನದ ಜನತೆಯ ಪರವಾಗಿ, ವಿಮಾನ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಸಂತಾಪ ಹಾಗೂ ಅನುಂಕಪವಿದೆ ಎಂದು ಗಿಲಾನಿ ಹೇಳಿದ್ದಾರೆ.

ಏರ್‌ ಇಂಡಿಯಾ ಬೊಯಿಂಗ್ 737-800 ವಿಮಾನ, ನಿನ್ನ ಬೆಳಿಗ್ಗೆ ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿ 159 ಮಂದಿ ಸಾವನ್ನಪ್ಪಿದ್ದರು.
ಸಂಬಂಧಿತ ಮಾಹಿತಿ ಹುಡುಕಿ