ರಾಮ ಮಂದಿರವು ಪಕ್ಷದ ಪ್ರಮುಖ ಕಾರ್ಯಸೂಚಿಯಾದರೂ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ರಾಮಮಂದಿರವನ್ನು ಚುನಾವಣಾ ವಿಷಯವಾಗಿ ಪರಿಗಣಿಸುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ರಾಮಮಂದಿರವು ಈ ಮೊದಲು ಕೂಡಾ ಬಿಜೆಪಿಗೆ ಚುನಾವಣಾ ವಿಷಯವಾಗಿರಲಿಲ್ಲ. ಇದು ಪಕ್ಷಕ್ಕೆ ಮುಖ್ಯವಾಗಿದ್ದರೂ, ಅಯೋಧ್ಯಾದಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡ ನಂತರವಷ್ಟೇ ಪಕ್ಷಕ್ಕೆ ತೃಪ್ತಿ ಉಂಟಾಗಲಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ಪಕ್ಷದ ಮುಖ್ಯಸ್ಥ ರಾಮಪತಿ ತ್ರಿಪಾಟಿ ತಿಳಿಸಿದ್ದಾರೆ.
ವಾಸ್ತವವಾಗಿ, ಈ ಮೊದಲು ಇತರ ಪಕ್ಷಗಳು ರಾಮಮಂದಿರ ವಿಚಾರವನ್ನು ಚುನಾವಣಾ ವಿಚಾರವಾಗಿ ತೆಗೆದುಕೊಂಡಿದ್ದವು ಎಂದು ಅವರು ಹೇಳಿದ್ದಾರೆ.
ಈ ನಡುವೆ, ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಕೈಜೋಡಿಸುವ ಕುರಿತಾದ ಸಂಭಾವ್ಯತೆಯನ್ನು ತಳ್ಳಿಹಾಕಿದ ಅವರು, ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಜಾತಿ ರಾಜಕಾರಣ ಮಾಡುವ ಪಕ್ಷದೊಂದಿಗೆ ಕೈಜೋಡಿಸಲು ಬಿಜೆಪಿ ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
|