ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದಾಗಿ ಗುರುವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶವಾಗಿದ್ದು, ಅವರು ಅಪಾಯದಿಂದ ಪಾರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಿಂದ ಕೊಯಮತ್ತೂರಿಗೆ ಚಾರ್ಟೆಡ್ ವಿಮಾನದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಕೂಡ ಜೊತೆಗಿದ್ದರು.
ಈ ಹಿನ್ನೆಲೆಯಲ್ಲಿ ಬಿಐಎಎಲ್ನಲ್ಲಿ ಸ್ವಲ್ಪ ಮಟ್ಟಿನ ಗೊಂದಲ ಉಂಟಾಯಿತು. ವಿಮಾನದ ಎಂಜಿನ್ನಲ್ಲಿ ಕಾಣಿಸಿಕೊಂಡ ದೋಷದಿಂದಾಗಿ ತುರ್ತು ಭೂ ಸ್ಪರ್ಶ ಮಾಡಿತು. ಈ ಘಟನೆಯಿಂದಾಗಿ ಸೋನಿಯಾ ಗಾಂಧಿಯವರು ಒಂದು ಗಂಟೆಗೂ ಹೆಚ್ಚಿನ ಕಾಲ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು. ಬಳಿಕ ಇನ್ನೊಂದು ವಿಮಾನದಲ್ಲಿ ಕೊಯಮತ್ತೂರಿಗೆ ಪ್ರಯಾಣ ಬೆಳೆಸಿದರು.
|