ಮಹಾರಾಷ್ಟ್ರದಲ್ಲಿ ಉತ್ತರ ಭಾರತೀಯರ ಮೇಲಿನ ಇತ್ತೀಚಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮರಾಠಿಯೇತರರ ರಕ್ಷಣೆ ಕುರಿತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.
ರಾಜ್ಯದ ಹೊರಗಿನವರ ಜೀವ ಮತ್ತು ಆಸ್ತಿಗಳನ್ನು ರಕ್ಷಿಸಲು ವಿಲಾಸ್ರಾವ್ ದೇಶ್ಮುಖ್ ಸರ್ಕಾರ ಏನೆಲ್ಲ ಕ್ರಮಕೈಗೊಂಡಿದೆ ಎಂಬುದಾಗಿ ನೋಟೀಸಿನಲ್ಲಿ ಕೇಳಲಾಗಿದ್ದು, ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಮರಾಠಿಯೇತರರಿಗೆ ರಕ್ಷಣೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆಗೆ ನ್ಯಾಯಾಲಯ ನೋಟೀಸ್ ನೀಡಿದೆ. ಮಹಾರಾಷ್ಟ್ರದಲ್ಲಿ ಉತ್ತರ ಭಾರತೀಯರಿಗೆ ರಕ್ಷಣೆ ಇಲ್ಲ ಮತ್ತು ರಾಜ್ಯ ಸರಕಾರ ಇವರ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. |