ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿಯವರ ಹುಟ್ಟುಹಬ್ಬ ನಿಧಿಗೆ ದೇಣಿಗೆ ನೀಡಲು ನಿರಾಕರಿಸಿದ ಕಾರಣಕ್ಕೆ ಹಲ್ಲೆಗೀಡಾಗಿ ಸಾವನ್ನಪ್ಪಿರುವ ಪಿಡಬ್ಲ್ಯುಡಿ ಎಂಜಿನಿಯರ್ ಎಂ.ಕೆ. ಗುಪ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ಪಿ ಶಾಸಕ ಶೇಖರ್ ತಿವಾರಿ ಹಾಗೂ ಇತರ ಒಂಬತ್ತು ಆರೋಪಿಗಳ ವಿರುದ್ಧ ಶನಿವಾರ ಆರೋಪಪಟ್ಟಿ ಸಲ್ಲಿಸಲಾಗಿದೆ.
ಮನೋಜ್ ಗುಪ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೇರಿದಂತೆ 10 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಇವರಲ್ಲಿ ತಿವಾರಿ ಸೇರಿದಂತೆ ಆರು ಮಂದಿಯನ್ನು ಇದೀಗಾಗಲೇ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಡಿಜಿಪಿ ವಿಕ್ರಮ್ ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.
ಯೋಗೇಂದ್ರ ದೊಹೋರೆ ಅಲಿಯಾಸ್ ಭಾಟಿಯಾ, ಹೋಶಿಯಾರ್ ಸಿಂಗ್ ಹಾಗೂ ಚಾಲಕರಾದ ದೇವೇಂದ್ರ ಮತ್ತು ಸಂತೋಷ್ ಅವರುಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ ಎಂದು ಅವರು ಹೇಳಿದರು. |